August 25, 2026
kranthikidi.com
ತಾಜಾಸುದ್ದಿರಾಜ್ಯ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ..!

ಬೆಂಗಳೂರು : ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದ ಸಾರಿಗೆ ನೌಕರರ ಮೂಲ ವೇತನ ಹೆಚ್ಚಳವಾಗಲಿದೆ. ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದೆ.

ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಹೊಸ ವೇತನ ಪರಿಷ್ಕರಣೆಯು 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ. ಈಗಾಗಲೇ ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಈ ಹೆಚ್ಚಳದಿಂದಾಗಿ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂ. ವೆಚ್ಚವಾಗಲಿದೆ. ರಾಮಲಿಂಗಾರೆಡ್ಡಿ ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆದೇಶಿಸಿದರು. ಈ ತಿಂಗಳಿನಿಂದ ಸಾರಿಗೆ ನೌಕರರ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆಯಾಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಕಾಶ್ಮೀರದಲ್ಲಿ ಮೇಘಸ್ಫೋಟ; ಹಠಾತ್ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿ ಹಾನಿ..!

Related posts

ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ – ವಾಂಗ್ಚುಕ್‌ ಆರೋಗ್ಯ ಕ್ಷೀಣ; ಆಸ್ಪತ್ರೆಗೆ ಶಿಫ್ಟ್‌..!

Kalpana Editor

2ನೇ ಬಾರಿಗೆ ದರ ಏರಿಕೆ ಬಿಸಿ – ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ..!

Kalpana Editor

ಕನ್ನಡ ಚಿತ್ರರಂಗದ ಹಿರಿಯ ನಟಿ ಸರೋಜಾ ಶ್ರೀಶೈಲನ್ ಇನ್ನಿಲ್ಲ..!

Kalpana Editor