July 11, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ..!

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇದರಿಂದಾಗಿ ಜನರ ಹಾಗೂ ಕಾರ್ಯಕರ್ತರ ಅಸಮಾಧಾನ ಹೆಚ್ಚಿದೆ ಎಂದು ಹೇಳಿದ್ದಾರೆ.

ಇದೇ ಹಿನ್ನೆಲೆಯಲ್ಲಿ, ಈಗಿನ ಸರ್ಕಾರವು ಮತದಾರರಿಗೆ “ನಮ್ಮ ಪಕ್ಷಕ್ಕೆ ಮತ ಹಾಕಿದರೆ 50 ಕೋಟಿ, 100 ಕೋಟಿ ಅನುದಾನ ಕೊಡುತ್ತೇವೆ” ಎಂದು ಆಮಿಷ ಒಡ್ಡಿರುವುದು ಅಡ್ಡಮತದಾನಕ್ಕೆ ಪ್ರಮುಖ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೆಲ ಶಾಸಕರು ಅನುದಾನದ ಆಮಿಷಕ್ಕೆ ಒಳಗಾಗಿ ಚಂಚಲ ಮನಸ್ಸು ಮಾಡಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಅಡ್ಡಮತದಾನದಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಡುವೆ ಯಾವುದೇ ವಿಶ್ವಾಸ ಕೊರತೆ ಉಂಟಾಗಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಇದು ಮುಂಬರುವ ಸಾರ್ವತ್ರಿಕ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು 2017ರ ರಾಜ್ಯಸಭಾ ಚುನಾವಣೆಯ ಉದಾಹರಣೆ ನೀಡಿ ವಿವರಿಸಿದರು. ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಜೆಡಿಎಸ್ ನಡುವೆ ಬಿರುಕು ಸೃಷ್ಟಿಸಲು ಯತ್ನಿಸುತ್ತಿದೆ ಎಂದೂ ಅವರು ಹೇಳಿದ್ದಾರೆ. ಅಡ್ಡಮತದಾನದ ಬಗ್ಗೆ ಬಿಜೆಪಿ ಹೈಕಮಾಂಡ್​​ಗೆ ಮಾಹಿತಿ ನೀಡಲು ದೆಹಲಿಗೆ ತೆರಳುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ : ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಹೊಸ ಪ್ರಜಾಸೇವೆ ಇಲಾಖೆ ಸ್ಥಾಪನೆ – ಡಿಕೆಶಿ

Related posts

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ – ಬಿ.ವೈ.ವಿಜಯೇಂದ್ರ

Kalpana Editor

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ; ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡು..!

Kalpana Editor

NEET ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ವಿದ್ಯಾರ್ಥಿಗಳ ರಕ್ತದ ಮೇಲೆ ನಡೆಯುತ್ತಿರುವ ಕೋಚಿಂಗ್ ಮಾಫಿಯಾಗಳು..!

Kalpana Editor