26.4 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ನಾವು ದಾರಿ ತಪ್ಪಿದಾಗ ತಿದ್ದಿ ಸರಿದಾರಿಗೆ ತರುತ್ತಿದ್ದರು; ತಾಯಿ ನೆನೆದು ಕಣ್ಣೀರಿಟ್ಟ ಹೆಚ್‌ಡಿಕೆ..!

ಬೆಂಗಳೂರು : ಜೆಡಿಎಸ್‌ ನಾಯಕ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ತಮ್ಮ ತಾಯಿ ಚೆನ್ನಮ್ಮ ಅವರನ್ನು ನೆನೆದು ಭಾವುಕರಾದರು. ತಾಯಿಯ ಜೊತೆ ಕಳೆದ ದಿನಗಳನ್ನು ನೆನೆದು ಕಣ್ಣೀರಿಟ್ಟರು. ಮಾಧ್ಯದೊಂದಿಗೆ ಮಾತನಾಡಿದ ಅವರು, ತಾಯಿ ಎಂದರೆ ದೇವರು. ಅವರ ಹಿತನುಡಿಗಳು, ಸಲಹೆಗಳು ಮತ್ತು ಉಪದೇಶಗಳೇ ನಮ್ಮ ಬದುಕಿಗೆ ದಾರಿ ತೋರಿಸಿವೆ. ನಾವು ಒಳ್ಳೆಯ ದಾರಿಯಲ್ಲಿ ನಡೆಯಲು ಕಾರಣವೇ ತಾಯಿ ನೀಡಿದ ಸಂಸ್ಕಾರ ಎಂದು ಕುಮಾರಸ್ವಾಮಿ ಹೇಳಿದರು.

ನಮ್ಮ ಕುಟುಂಬದ ಏಳು-ಬೀಳಿನ ಸಮಯದಲ್ಲೂ ತಾಯಿ ಸಮಚಿತ್ತ ಕಾಪಾಡಿಕೊಂಡಿದ್ದರು. ಅವರಷ್ಟು ದೈವ ಭಕ್ತರು ಇನ್ನೊಬ್ಬರಿಲ್ಲ. ಕಷ್ಟವಾಗಲಿ, ಸುಖವಾಗಲಿ ಹೇಗೆ ಬದುಕಬೇಕು ಎಂಬುದನ್ನು ಅವರು ಕಲಿಸಿಕೊಟ್ಟರು. ಮನೆಗೆ ಬರುವ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು. ಹೊಳೆನರಸೀಪುರದಲ್ಲಿರುವ ಮನೆಗೆ ಓದಲು ಬರುತ್ತಿದ್ದ ಮಕ್ಕಳಿಗೂ ವಾರದನ್ನವನ್ನು ನೀಡುತ್ತಿದ್ದರು ಎಂದು ನೆನಪಿಸಿಕೊಂಡರು.

ನಾವು ದಾರಿ ತಪ್ಪಿದಾಗಲೆಲ್ಲ ತಿದ್ದಿ ಸರಿದಾರಿಗೆ ತರುತ್ತಿದ್ದರು. ಕಳೆದ ಒಂದು ವರ್ಷದಿಂದ ಅವರು ಹೆಚ್ಚು ಮಾತನಾಡುತ್ತಿರಲಿಲ್ಲ. ಮನೆಗೆ ಬಂದವರಿಗೆ ʼಊಟ ಮಾಡಿʼ ಎಂದು ಹೇಳುವುದಷ್ಟೇ ಅವರ ಮಾತಾಗಿತ್ತು ಎಂದು ಹೇಳುವಾಗ ಭಾವುಕರಾದರು. ತಾಯಿಯ ಪಾರ್ಥಿವ ಶರೀರದ ದರ್ಶನಕ್ಕೆ ಇಂದು ಬೆಳಿಗ್ಗೆ 11 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಹೊಳೆನರಸೀಪುರದಲ್ಲಿ ಅಂತಿಮ ದರ್ಶನದ ನಂತರ, ಮಾವಿನಕೆರೆ ರಂಗನಾಥಸ್ವಾಮಿ ದೇವಸ್ಥಾನದ ಸಮೀಪ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ : ಚೆನ್ನಮ್ಮ ಅಂತಿಮ ದರ್ಶನ ಪಡೆದ ದುನಿಯಾ ವಿಜಯ್, ದೊಡ್ಡಣ್ಣ, ಡಾಲಿ, ನಟಿ ಪೂಜಾಗಾಂಧಿ

Related posts

ಮಹಿಳೆ ಜೊತೆ ಅಸಭ್ಯ ವರ್ತನೆ; ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತ..!

Kalpana Editor

ಆಣೆ-ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ಭೇಟಿ – ಬಿ.ವೈ. ವಿಜಯೇಂದ್ರ

Kalpana Editor

ಮೈಸೂರು ದಸರಾ 2026; ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇಸಿಜಿ

Kalpana Editor