July 12, 2026
kranthikidi.com
ತಾಜಾಸುದ್ದಿವಿದೇಶ

ಭಾರತೀಯರು ಜೀವ ಕಳೆದುಕೊಂಡಿದ್ದಾರೆ; ಟ್ರಂಪ್ ಸಮ್ಮುಖದಲ್ಲಿ ನಾವಿಕರ ಸುರಕ್ಷತೆ ಬಗ್ಗೆ ದನಿ ಎತ್ತಿದ ಮೋದಿ

ಪ್ಯಾರಿಸ್ : ಫ್ರಾನ್ಸ್‌ನ ಏವಿಯನ್-ಲೆ-ಬೈನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾಗಿ, ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ. ಸುಮಾರು 16 ತಿಂಗಳ ಬಳಿಕ ಉಭಯ ನಾಯಕರು ನೇರ ಮುಖಾಮುಖಿಯಾಗಿ ಮಾತುಕತೆ ನಡೆಸಿದರು.

ಬಳಿಕ ಶೃಂಗದಲ್ಲಿ ʻಹೊಸ ಪಾಲುದಾರಿಕೆ ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ನಿರ್ಮಾಣʼ ಕುರಿತಾಗಿ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಈ ವೇಳೆ ಅಮೆರಿಕದ ಮಿಲಿಟರಿ ದಾಳಿಯಲ್ಲಿ ಇತ್ತೀಚೆಗೆ ಸಾವನ್ನಪ್ಪಿದ ಭಾರತೀಯ ನಾವಿಕರ ವಿಷಯ ಪ್ರಸ್ತಾಪಿಸಿದರು. ಟ್ರಂಪ್‌ ಸಮ್ಮುಖದಲ್ಲೇ ಭಾರತೀಯ ನಾವಿಕರ ಸುರಕ್ಷತೆ ಬಗ್ಗೆ ದನಿ ಎತ್ತಿದರು.

ಅಮೆರಿಕ-ಇರಾನ್‌ ಸಂಘರ್ಷವು ಆ ಪ್ರದೇಶದಲ್ಲಿರುವ ದೇಶಗಳ ಮೇಲೆ ಗಮನಾರ್ಹ ಮಾನವ ಮತ್ತು ಆರ್ಥಿಕ ನಷ್ಟವನ್ನ ಉಂಡುಮಾಡಿದೆ ಎಂದು ಹೇಳಿದರು. ಪಶ್ಚಿಮ ಏಷ್ಯಾದಲ್ಲಿ ಶಾಂತಿ ಒಪ್ಪಂದದಲ್ಲಿ ಪ್ರಗತಿಯನ್ನ ನಾವು ಸ್ವಾಗತಿಸುತ್ತೇವೆ. ಆದ್ರೆ ಕಳೆದ ಕೆಲ ದಿನಗಳಲ್ಲಿ ನಮ್ಮ ಮಿತ್ರ ರಾಷ್ಟ್ರಗಳಲ್ಲಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟಕ್ಕೆ ಈ ಸಂಘರ್ಷ ಕಾರಣವಾಗಿದೆ.

ಹಾರ್ಮಜ್‌ ಜಲಸಂಧಿಯ ನಿರ್ಬಂಧದಿಂದ ಸಮುದ್ರ ವ್ಯಾಪಾರಕ್ಕೆ ಉಂಟಾದ ಅಡ್ಡಿಯು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಹಲವಾರು ಭಾರತೀಯರೂ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗಮನ ಸೆಳೆದರು. ಪಶ್ಚಿಮ ಏಷ್ಯಾ ಸಂಘರ್ಷದ ವ್ಯಾಪಕ ಪರಿಣಾಮ ಎತ್ತಿ ತೋರಿಸಿದ ಪ್ರಧಾನಿ, ಸಮುದ್ರ ವ್ಯಾಪಾರದಲ್ಲಿನ ಅಡಚಣೆಗಳು ಮತ್ತು ಪ್ರಮುಖ ಹಡಗು ಕಾರಿಡಾರ್‌ಗಳಲ್ಲಿ ಕಾರ್ಯನಿರ್ವಹಿಸುವ ನಾವಿಕರು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಗಮನ ಸೆಳೆದರು.

ಜಾಗತಿಕ ಸಮುದ್ರ ವ್ಯಾಪಾರದ ಮೂಲಕ ರಾಷ್ಟ್ರಗಳನ್ನು ಸಂಪರ್ಕಿಸುವ ನಾವಿಕರ ಸುರಕ್ಷತೆ ಖಚಿತಪಡಿಸಿಕೊಳ್ಳುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ. ಸಮುದ್ರ ಮಾರ್ಗಗಳು ಸುರಕ್ಷಿತವಾಗಿರುವುದನ್ನ ಮತ್ತು ನಾವಿಕರು ಭಯವಿಲ್ಲದೆ ತಮ್ಮ ಕರ್ತವ್ಯ ನಿರ್ವಹಿಸಬಹುದು ಎಂಬುದನ್ನ ನಾವು ಖಚಿತಪಡಿಸಿಕೊಳ್ಳಬೇಕು. ಅದಕ್ಕಾಗಿ ಅಂತಾರಾಷ್ಟ್ರೀಯ ಸಹಕಾರ ಬಲಪಡಿಸಲು ಭಾರತ ಎಲ್ಲಾ ದೇಶಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದರು. ಅಮೆರಿಕ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಮಾತುಕತೆಗೆ ಒಂದು ದಿನ ಮೊದಲು ಪ್ರಧಾನಿ ಮೋದಿ ಈ ವಿಷಯ ಪ್ರಸ್ತಾಪಿಸಿದರು. ಇದನ್ನೂ ಓದಿ : NEET ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ವಿದ್ಯಾರ್ಥಿಗಳ ರಕ್ತದ ಮೇಲೆ ನಡೆಯುತ್ತಿರುವ ಕೋಚಿಂಗ್ ಮಾಫಿಯಾಗಳು..!

Related posts

ಮುರಿದು ಬಿತ್ತು ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ

Kalpana Editor

ಬಿರುಗಾಳಿ ಸಹಿತ ಭಾರೀ ಮಳೆ; ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ..!

Kalpana Editor

ನಾಯಿ ಗೂಡಲ್ಲಿ ಲಾಕ್‌ ಆಗಿದ್ದ, ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು..!

Kalpana Editor