29.2 C
ಬೆಂಗಳೂರು
June 10, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಭೀಮಾತೀರದಲ್ಲಿ ಸಾಮೂಹಿಕ ಹತ್ಯೆ ಕೇಸ್‌ – 12 ಆರೋಪಿಗಳ ಅರೆಸ್ಟ್‌..!

ವಿಜಯಪುರ : ಭೀಮಾತೀರದಲ್ಲಿ 6 ಜನರ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ 12 ಜನ ಆರೋಪಿಗಳನ್ನ ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಇಂದು ಇಂಡಿ ಕೋರ್ಟ್‌ಗೆ ಚಡಚಣ ಪೋಲಿಸರು ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ.

ಮೇ 29 ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಜಮೀನಿನಲ್ಲಿ ಭೀಕರ ಹತ್ಯಾಕಾಂಡ ನಡೆದಿತ್ತು. ಡಬಲ್ ಬ್ಯಾರಲ್ ಗನ್‌ನಿಂದ ಗುಂಡು, ಮಚ್ಚುಗಳಿಂದ ಕತ್ತರಿಸಿ 6 ಜನರ ಹತ್ಯೆ ಮಾಡಲಾಗಿತ್ತು.

ಈ ಹತ್ಯಾಕಂಡದಲ್ಲಿ ಚಡಚಣದ ಪ್ರತಿಷ್ಠಿತ ಕುಟುಂಬದ 5 ಜನರ ಹಾಗೂ ಇವರ ಜೊತೆಗೆ ಬಂದಿದ್ದ ಓರ್ವನನ್ನ ಹಂತಕರು ಹತ್ಯೆಗೈದಿದ್ದರು. ದುಂಡಪ್ಪ ನಿರಾಳೆ (65), ಶಿವಪುತ್ರ ನಿರಾಳೆ (58), ಚಂದ್ರಕಾಂತ ನಿರಾಳೆ (55), ಶಿವಪುತ್ರ ಮಕ್ಕಳಾದ ರಾಹುಲ್ (25), ಸಮರ್ಥ (23) ಹಾಗೂ ಶಬ್ಬಿರ್ ಅತ್ತಾರ್ (45) ಹತ್ಯೆಗೀಡಾದವರು.

ಈ ಹತ್ಯೆ ಗೋವಿಂದಪುರ ಗ್ರಾಮದ ಅಪ್ಪುಗೌಡ ಪಾಟೀಲ್ ಕುಟುಂಬ ಸದಸ್ಯರಿಂದ ನಡೆದಿದೆ ಎಂದು ನಿರಾಳೆ ಕುಟುಂಬಸ್ಥರು ದೂರು ದಾಖಲಿಸಿದ್ದರು. ಸದ್ಯ ಈ ಹತ್ಯಾಕಾಂಡ ನಡೆಸಿದ್ದವರ ಪೈಕಿ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Related posts

24 ಕೋಟಿ ಮೌಲ್ಯದ ಜಮೀನು ಖರೀದಿಸಿದ ಯಶ್-ರಾಧಿಕಾ ದಂಪತಿ..!

Kalpana Editor

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ – ಕಾಂಗ್ರೆಸ್ ಟ್ವೀಟ್

Kalpana Editor

ಹೊಸ ಮೃಗಾಲಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ; ಆನೆಧಾಮಕ್ಕೆ ಶೀಘ್ರವೇ ಟೆಂಡರ್ – ಸಚಿವ ಈಶ್ವರ ಖಂಡ್ರೆ

Kalpana Editor