22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯ ಗೌಡ ಪಾಟೀಲ್‌

ವಿಜಯಪುರ : ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಇದೀಗ ಹಿಂಪಡೆದಿದ್ದಾರೆ. ಡಿಕೆಶಿ ಸಂಪುಟದ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬೇಸರಗೊಂಡಿದ್ದ ಯಶವಂತರಾಯ ಗೌಡ ಪಾಟೀಲ್ ಅವರು ರಾಜೀನಾಮೆ ನೀಡಿದ್ದರು.

ಇದೀಗ ರಾಜೀನಾಮೆ ಪತ್ರ ವಾಪಸ್ ಪಡೆಯುವ ಬಗ್ಗೆ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ʻಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದ್ದ ಅವರು, ಕಾಂಗ್ರೆಸ್‌ನಲ್ಲಿ ನಿಷ್ಠೆ, ಪ್ರಾಮಾಣಿಕತೆಗೆ ಬೆಲೆಯಿಲ್ಲ. 2023ರ ಪೂರ್ವದಲ್ಲೇ ನನಗೆ ಕರೆದು ಭರವಸೆ ಕೊಟ್ಟಿದ್ದರು. ಈಗ ನಾನು ಬಿಟ್ಟು ಹೋಗ್ತಿಲ್ಲ, ಅವರೇ ನನ್ನನ್ನು ಬಿಟ್ಟಿದ್ದಾರೆ ಎಂದು ಬೇಸರ ಹೊರಹಾಕಿದ್ದರು.

ಕಳೆದ ಬಾರಿಯೇ ನಿಗಮ ಮಂಡಳಿ ಕೊಡ್ತೀವಿ ಅಂದಿದ್ದರು. ಆದರೆ ನಾನು ಬೇಡ ಅಂದಿದ್ದೆ. ಸ್ವಾತಂತ್ರ‍್ಯದ ನಂತರ ಇದುವರೆಗೂ ಇಂಡಿ ಕ್ಷೇತ್ರದವರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ನಾನು ರಾಜೀನಾಮೆ ಕೊಟ್ಟಿದ್ದೀನಿ, ಅದನ್ನ ಅಂಗೀಕಾರ ಮಾಡಬೇಕು. ಯಾವುದೇ ಕಾರಣಕ್ಕೂ ನಾನು ವಾಪಸ್ ಪಡೆಯಲ್ಲ. ಯಾವುದೇ ಕಾರಣಕ್ಕೂ ನಾನು ಶಾಸಕನಾಗಿ ಮುಂದುವರೆಯಲ್ಲ. ಜಿಲ್ಲೆಯ ರಾಜಕಾರಣ ಬೀದಿಗೆ ಬಂದಿದೆ ಎಂದು ಕಿಡಿಕಾರಿದ್ದರು. ಈಗಾಗಲೇ ಡಿಕೆಶಿ ಸಂಪುಟಕ್ಕೆ 19 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ : ರಾಘವೇಂದ್ರ ಹಿಟ್ನಾಳ್‌ಗೆ ಕೈತಪ್ಪಿದ ಮಂತ್ರಿಗಿರಿ; ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ..!

Related posts

ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್‌ಐವಿ ಸೋಂಕು ವದಂತಿ ಸುಳ್ಳು – ಸಚಿವ ಯುಟಿ ಖಾದರ್​ ಸ್ಪಷ್ಟನೆ..!

Kalpana Editor

ಧಾರವಾಡದ ಖಾಸಗಿ ಶಾಲೆಯ ಮಕ್ಕಳಿಗೆ ವಿಚಿತ್ರ ಜ್ವರ…!

Kalpana Editor

ರಣವೀರ್ ಸಿಂಗ್ 3 ವರ್ಷ ಬ್ಯಾನ್ ಆಗಿಲ್ಲ – ಎಫ್‌ಡಬ್ಲುಐಸಿಇ ಸ್ಪಷ್ಟನೆ..!

Kalpana Editor