August 25, 2026
kranthikidi.com
ತಾಜಾಸುದ್ದಿದೇಶ

ಮುಂಬೈಯಲ್ಲಿ ಭಾರೀ ಮಹಾ ಮಳೆಗೆ ಕೊಚ್ಚಿ ಹೋದ ಸಾವಿರಕ್ಕೂ ಹೆಚ್ಚು ಸಿಲಿಂಡರ್‌ಗಳು..!

ಮುಂಬೈ : ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ರಾಯಗಢದ HPCL ಬಾಟ್ಲಿಂಗ್ ಸ್ಥಾವರಕ್ಕೆ ಪಾತಾಳಗಂಗಾ ನದಿ ನೀರು ನುಗ್ಗಿ 3,000, LPG ಸಿಲಿಂಡರ್‌ಗಳು ತೇಲಿ ಹೋಗಿವೆ. ಸಿಲಿಂಡರ್‌ಗಳು ತೇಲಿ ಹೋಗುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. LPG ಸಿಲಿಂಡರ್‌ ಅಭಾವದ ನಡುವೆ ಈ ಘಟನೆ ಸಂಭವಿಸಿದ್ದು, ತೀವ್ರ ಆಘಾತಕ್ಕೆ ಕಾರಣವಾಗಿದೆ.

ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದಲ್ಲಿರುವ HPCL ನ ಪಾತಾಳಗಂಗಾ LPG ಬಾಟ್ಲಿಂಗ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅವುಗಳಲ್ಲಿ ಕೆಲವು ಸಿಲಿಂಡರ್‌ಗಳಲ್ಲಿ ಗ್ಯಾಸ್‌ ತುಂಬಿವೆ, ಕೆಲವು ಖಾಲಿಯಾಗಿದ್ದವು ಎನ್ನಲಾಗಿದೆ. ನದಿಯ ಉದ್ದಕ್ಕೂ ತೇಲುತ್ತಿರುವ ಸಿಲಿಂಡರ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನರ ಗಮನ ಸೆಳೆದಿದೆ. ಈ ಘಟನೆಯ ನಂತರ, ಜಿಲ್ಲಾಡಳಿತ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿದೆ.

ರಾಯಗಡ ಜಿಲ್ಲಾಧಿಕಾರಿ ಕಿಶನ್ ಜವಾಲೆ ಅವರು, ನದಿಯಲ್ಲಿ ಕಂಡುಬರುವ ಅಥವಾ ದಡಕ್ಕೆ ಬರುವ ಸಿಲಿಂಡರ್ ಯಾವ ಸ್ಥಿತಿಯಲ್ಲಿವೆ ಎಂಬ ಬಗ್ಗೆ ಮಾಹಿತಿ ಇಲ್ಲ. ಇದರಿಂದಾಗಿ ಅವುಗಳ ಬಳಿಗೆ ಹೋಗದಂತೆ ಜನರಿಗೆ ಮನವಿ ಮಾಡಿದ್ದಾರೆ. ಯಾವುದೇ ಸಿಲಿಂಡರ್‌ನ್ನು ಎತ್ತಿಕೊಳ್ಳಬಾರದು, ಸ್ಥಳಾಂತರಿಸಬಾರದು ಅಥವಾ ಮನೆಗೆ ತೆಗೆದುಕೊಂಡು ಹೋಗಬಾರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಸಿಲಿಂಡರ್ ಕಾಣಿಸಿದರೂ ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅದರಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು. ಅವುಗಳನ್ನು ಮುಟ್ಟುವುದರಿಂದ ಜೀವಕ್ಕೆ ಅಪಾಯ ಆಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ನಿವಾಸಿಗಳು ಜಾಗರೂಕರಾಗಿರಲು ಪದೇ ಪದೇ ಒತ್ತಾಯಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ : ಮಲೆನಾಡಲ್ಲಿ ಮಳೆ ಅಬ್ಬರ – ಹೆಬ್ಬೆ ಫಾಲ್ಸ್‌ನಲ್ಲಿ ಜಲವೈಭವ

Related posts

ಶೂಟಿಂಗ್ ವೇಳೆ ಅವಘಡ; ತೆಲುಗು ಸ್ಟಾರ್ ನಂದಮೂರಿ ಬಾಲಯ್ಯಗೆ ಶಸ್ತ್ರಚಿಕಿತ್ಸೆ..!

Kalpana Editor

ʻರಾಮಮಂದಿರ ದೇಣಿಗೆ ಕಳವುʼ ಚರ್ಚೆಗೆ ಒತ್ತಾಯ – ಲೋಕಸಭೆಯಲ್ಲೂ ಗದ್ದಲ, ಕಲಾಪ ಮುಂದೂಡಿಕೆ..!

Kalpana Editor

‘ವಿಕಸಿತ ಭಾರತಕ್ಕೆ ಮಾದಕ ವ್ಯಸನ ಮುಕ್ತ ಯುವಜನತೆ ಅಗತ್ಯ’ – ಅಭಿಯಾನಕ್ಕೆ ಮೋದಿ ಚಾಲನೆ..!

Kalpana Editor