August 25, 2026
kranthikidi.com
ತಾಜಾಸುದ್ದಿದೇಶ

ಪ್ಯಾರಾಮೆಡಿಕಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ – ನಾಲ್ವರು ಬಂಧನ..!

ಜೈಪುರ : ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಜುನ್ಜುನುವಿನ ಎಸ್ ಕರಣ್ ಕಾಲೇಜಿನ ಪ್ಯಾರಾಮೆಡಿಕಲ್ ವಿಭಾಗದ ಮುಖ್ಯಸ್ಥ ಕೃಷ್ಣ ಕುಮಾರ್ ಸೈನಿ, ಎಸ್ ಕರಣ್ ಕಾಲೇಜಿನ ರೇಡಿಯಾಲಜಿ ವಿಭಾಗದ ಉಪನ್ಯಾಸಕ ಶಂಕರ್ ಲಾಲ್ ಜಾಟ್, ಪ್ರಭಾ ಮೆಮೋರಿಯಲ್ ಪಿಜಿ ಕಾಲೇಜಿನೊಂದಿಗೆ ಸಂಬಂಧ ಹೊಂದಿರುವ ರಾಮಕೃಷ್ಣ ಮಂಡಿವಾಲ್ ಮತ್ತು ಕಾಲೇಜಿನ ಆಡಳಿತಾಧಿಕಾರಿ ದೇವಕೃಷ್ಣ ಮಂಡಿವಾಲ್ ಬಂಧಿತರು.

ಜೈಪುರದ ಪ್ರಭಾ ದೇವಿ ಮೆಮೋರಿಯಲ್ ಪಿಜಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಆರೋಪಿಗಳು ಸುಮಾರು 40-45 ಅಭ್ಯರ್ಥಿಗಳಿಂದ ಭಾರಿ ಮೊತ್ತದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ನಕಲಿನ ಬಗ್ಗೆ ಜೂನ್ 27 ರಂದು ಪೊಲೀಸರಿಗೆ ಗುಪ್ತಚರ ಮಾಹಿತಿ ಬಂದಿತ್ತು ಎಂದು ಉಪ ಪೊಲೀಸ್ ಆಯುಕ್ತ ಪ್ರಶಾಂತ್ ಕಿರಣ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಮೊದಲ ವರ್ಷದಲ್ಲಿ ಪಾಸ್‌ ಆಗದೇ ಉಳಿದಿದ್ದರು. ಅವರನ್ನು ಪಾಸ್‌ ಮಾಡಲು, ಆರೋಪಿಗಳು ಜೈಪುರ ಪರೀಕ್ಷಾ ಕೇಂದ್ರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ : ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್‌ – ಟ್ರ್ಯಾಕಿಂಗ್‌ ಸಿಸ್ಟಂ ಆಫ್‌ ಮಾಡಿ ಭಾರತಕ್ಕೆ ಹಡಗುಗಳ ಪ್ರಯಾಣ

Related posts

ರಾಜ್ಯಾದ್ಯಂತ ಥಿಯೇಟರ್‌ಗಳಿಂದ ಜನ ನಾಯಗನ್ ಹಲವು ಪ್ರದರ್ಶನ ರದ್ದು..!

Kalpana Editor

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ..!

Kalpana Editor

ಕರ್ನಾಟಕದಲ್ಲೇ ಜನನಾಯಗನ್‌ ಸಿನಿಮಾಗೆ ಸಂಕಷ್ಟ ಎದರು..!

Kalpana Editor