August 1, 2026
kranthikidi.com
ತಾಜಾಸುದ್ದಿರಾಜ್ಯ

ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ನೂತನ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.

ಮಂಡಕಹಳ್ಳಿ ಹೆಲಿಪ್ಯಾಡ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೂಗುಚ್ಛ ನೀಡಿ ಸ್ವಾಗತಿಸಿದರು.

ರಸ್ತೆ ಬದಿಯಲ್ಲಿ ನಿಂತಿದ್ದ ಅಭಿಮಾನಿಗಳು ಪ್ರಧಾನಿ ಪರ ಘೋಷಣೆಗಳನ್ನು ಕೂಗಿ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಪ್ರಧಾನಿ ಮೋದಿ ಅವರು ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ತೆರಳಿ, ಅಲ್ಲಿ ನಿರ್ಮಾಣಗೊಂಡಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಆಶ್ರಮ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ನಮಿಸಿ ಪೂಜೆ ಸಲ್ಲಿಸಿದರು.

ಸ್ಮಾರಕ ಆವರಣದಲ್ಲಿ ಬಿಲ್ವಪತ್ರೆ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್ ನೀಡಿದರು. ಆಶ್ರಮದೊಳಗೆ ಕೆಲಕಾಲ ಧ್ಯಾನ ಮಾಡಿದ ಪ್ರಧಾನಿ ಮೋದಿ, ಬಳಿಕ ಅಲ್ಲಿನ ಸ್ವಾಮೀಜಿಗಳು ಮತ್ತು ಆಶ್ರಮದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು. ಇದನ್ನೂ ಓದಿ : ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್‌ಐವಿ ಸೋಂಕು ವದಂತಿ ಸುಳ್ಳು – ಸಚಿವ ಯುಟಿ ಖಾದರ್​ ಸ್ಪಷ್ಟನೆ..!

Related posts

ನೆಪೊಟಿಸಮ್ ಚರ್ಚೆ: ಶಿವಣ್ಣ-ಅಪ್ಪು ಹೆಸರು ಹೇಳಿದ್ದಕ್ಕೆ, ಸುದೀಪ್ ಸ್ಪಷ್ಟನೆ..!

Kalpana Editor

ಅಭಿಮಾನಿಗಳಿಗೆ ಹೆಲ್ತ್ ಕಾರ್ಡ್ ಕೊಡಿಸಿದ ನಟ ಶಿವರಾಜ್ ಕುಮಾರ್

Kalpana Editor

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಸರ್ಕಾರದ ವಿರುದ್ಧ ಆಕ್ರೋಶ – ಬಸವರಾಜ ಬೊಮ್ಮಾಯಿ

Kalpana Editor