August 26, 2026
kranthikidi.com
ತಾಜಾಸುದ್ದಿರಾಜ್ಯ

ಪೋಕ್ಸೋ ಪ್ರಕರಣ; ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಆದೇಶ ಮುಂದೂಡಿಕೆ..!

ದಾವಣಗೆರೆ : ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ಕಾಯ್ದಿರಿಸಿದೆ. ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.‌ ಜಾಮೀನು ರದ್ದು ಅರ್ಜಿ ವಿಚಾರಣೆ ಕಳೆದ ಜೂ.11 ರಂದು ನಡೆದಿತ್ತು.

ಈಗ ಹೈಕೋರ್ಟ್‌‌ನಲ್ಲಿ ಜೂ.23ಕ್ಕೆ ವಚನಾನಂದ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇದ್ದು, ಹೈಕೋರ್ಟ್ ಅದೇಶದ ಬಳಿಕ ಜಿಲ್ಲಾ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ತೀರ್ಪನ್ನು ಪ್ರಕಟಿಸಲಿದೆ ಎಂದು ಸ್ವಾಮೀಜಿ ಪರ ವಕೀಲ ಎಸ್.ವಿ ಪಾಟೀಲ್ ತಿಳಿಸಿದರು. ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ ಮೆಟ್ಟಿಲೇರಿರುವುದು ಜಿಲ್ಲಾ ನ್ಯಾಯಾಲಯದ ಆದೇಶ ತಡವಾಗಲು ಕಾರಣವಾಗಿದೆ. ಕಳೆದ ಜೂ.6 ರಂದೇ ಸಂತ್ರಸ್ತ ಬಾಲಕನ ತಾಯಿ ವಚನಾನಂದ ಸ್ವಾಮೀಜಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಈ ವಿಚಾರವನ್ನು ದೂರುದಾರರು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ತಿಳಿಸಿರಲಿಲ್ಲ. ಅದ್ದರಿಂದ ಇಂದಿನ ಅದೇಶ ಮುಂದೂಡಿಕೆಯಾಗಿದೆ. ಹೈಕೋರ್ಟ್‌ನಲ್ಲಿ ಜೂ.23 ರಂದು ಜಾಮೀನು ರದ್ದತಿ ಅರ್ಜಿಯ ವಿಚಾರಣೆ ನಡೆಯಲಿದ್ದು, ಖುದ್ದಾಗಿ ವಚನಾನಂದ ಶ್ರೀಗಳು ತಮ್ಮ ವಕೀಲರ ಜೊತೆ ಹೈಕೋರ್ಟ್‌ಗೆ ಹಾಜರಾಗಲಿದ್ದಾರೆ. ಇದನ್ನೂ ಓದಿ : ಮೇಕೆದಾಟು ಬಗ್ಗೆ ಮತ್ತೆ ತಮಿಳುನಾಡು ಕ್ಯಾತೆ; ಮಾತುಕತೆಗೆ ಸಿದ್ದ ಎಂದ ಡಿಕೆಶಿ

Related posts

ಕಾವೇರಿ ವಿವಾದ – ಕುಡಿಯುವ ನೀರು ರಕ್ಷಿಸುವುದು, ನಮ್ಮ ಮೊದಲ ಆದ್ಯತೆ; ಬೊಮ್ಮಾಯಿ

Kalpana Editor

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಡಿಕೆಶಿ ಭಾಗಿ..!

Kalpana Editor

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ..!

Kalpana Editor