August 24, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಪಿಆರ್​ಸಿ ಜಟಾಪಟಿ; ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ..!

ಮೈಸೂರು : ರಾಜ್ಯದಲ್ಲಿ ಸರ್ಕಾರದಿಂದ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘‘ಈ ಆದೇಶವು ಸಂವಿಧಾನದ ಉಲ್ಲಂಘನೆಯಾಗಿದ್ದು, ಕೂಡಲೇ ಅದನ್ನು ವಾಪಸ್ ಪಡೆಯುವಂತೆ’’ ಆಗ್ರಹಿಸಿದ್ದಾರೆ.

ನಗರದಲ್ಲಿ ನಡೆದ ಕಾಯಕ ಸಮುದಾಯಗಳ ಸಭೆಯಲ್ಲಿ ಮಾತನಾಡಿದ ಅವರು, ‘‘ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಪೌರತ್ವವನ್ನು ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಸೇರಿದ್ದು. ಪ್ರಸ್ತುತ ಆದೇಶವು 10 ವರ್ಷಗಳ ಕಾಲ ರಾಜ್ಯದಲ್ಲಿ ವಾಸಿಸಿದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸಿದ್ದು, ಇದು ವಿದೇಶಿಯರಿಗೆ, ವಿಶೇಷವಾಗಿ ಬಾಂಗ್ಲಾದೇಶದವರಿಗೆ ನೆರವಾಗುವ ಹುನ್ನಾರ’’ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ : ವಿಯೆಟ್ನಾಂ ದ್ವೀಪದಲ್ಲಿ ಭಾರತೀಯ ಪ್ರವಾಸಿಗರಿದ್ದ, ಬೋಟ್‌ ಮುಳುಗಡೆ; 15 ಮಂದಿ ಸಾವು..!

Related posts

ರಾಜ್ಯದ ಪರಿಸ್ಥಿತಿ ಅವಲೋಕಿಸಿ, ಬರಗಾಲ ಪೀಡಿತ ಪ್ರದೇಶ ಘೋಷಣೆ – ಸಿಎಂ ಡಿಕೆಶಿ

Kalpana Editor

ಬೆಂಗಳೂರಿಗೆ ಕೆಂಪೇಗೌಡರ ಅಪ್ರತಿಮ ಕೊಡುಗೆ, ಬಿ.ವೈ.ವಿಜಯೇಂದ್ರ

Kalpana Editor

ಚೀನಾಗೆ ಟಕ್ಕರ್‌; ಭಾರತದ ನಕ್ಷೆಗೆ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಸೇರ್ಪಡೆ..!

kknewskannada1987@gmail.com