ಬೆಂಗಳೂರು : ಆರ್ಎಸ್ಎಸ್ ನವರು ನಮ್ಮ ಮಾತು, ನಿಮ್ಮ ಮಾತು, ಸಂವಿಧಾನದ ಮಾತು ಕೇಳಲ್ಲ. ಆದರೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳೇ RSS ನೋಂದಣಿ ಆಗಲಿ ಅಂದಿದ್ದಾರೆ. ಧರ್ಮಗುರುಗಳ ಮಾತಾದ್ರೂ ಕೇಳಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವಿಶ್ವದ ಅತಿ ದೊಡ್ಡ ಸಂಸ್ಥೆ ಆರ್ಎಸ್ಎಸ್ ಏಕೆ ನೋಂದಣಿ ಆಗಿಲ್ಲಎಂದು ಕೇಳೋದೇ ತಪ್ಪಾ? ಅತಿ ದೊಡ್ಡ ಸಂಸ್ಥೆ ಆರ್ಎಸ್ಎಸ್ ದೊಡ್ಡ ಕಾರ್ಯಕ್ರಮಗಳನ್ನು ಮಾಡುತ್ತೆ. ಅಷ್ಟೊಂದು ಜನ ಬೀದಿಗೆ ಇಳಿಯುತ್ತಾರೆ. ಹೀಗಾಗಿ ನೋಂದಣಿ ಮಾಡಿಸಿಕೊಳ್ಳಿ ಎಂದಿದ್ದೇನೆ. ನೀವು ಯಾರ ಬಳಿಯೂ ಕೈಚಾಚುವುದು ಬೇಡ, ಶುಲ್ಕ ಏನಿದೆಯೋ ಅದನ್ನೂ ಬೇಕಿದ್ದರೆ ನಾನೇ ಕಟ್ಟುತ್ತೇನೆ ಎಂದವರು ಹೇಳಿದ್ದಾರೆ. ಇದನ್ನೂ ಓದಿ : ಹಿರಿಯ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ; ಡಾ. ರಾಜ್ಕುಮಾರ್ ರೀತಿ ನೇತ್ರದಾನ..!
