22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ; ಕೇಂದ್ರದ ನಡೆ ಖಂಡಿಸಿ, ಮೋದಿಗೆ ಪರಮೇಶ್ವರ್‌ ಪತ್ರ..!

ಬೆಂಗಳೂರು : ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಜಟಾಪಟಿ ವಿಚಾರವಾಗಿ ಕೇಂದ್ರದ ನಡೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿಗೆ ಡಿಸಿಎಂ ಡಾ. ಜಿ.ಪರಮೇಶ್ವರ್‌ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಗಳೇನು? – ನೀಟ್ ಹಿಂತೆದುಕೊಳ್ಳಿ ಮತ್ತು ಪಾರದರ್ಶಕತೆ, ಅರ್ಹತೆಯ ಆಧಾರದ ಸಿಇಟಿಯನ್ನು ಮರುಸ್ಥಾಪಿಸಿ. ಕಾಲಮಿತಿಯಲ್ಲಿ ಪಾರದರ್ಶಕ ತನಿಖೆಗೆ ಕ್ರಮವಹಿಸಿ, ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಹಾಗೂ ಹೋರಾಟದಲ್ಲಿ ಗಾಯಗೊಂಡವರಿಗೆ ಪರಿಹಾರ ಒದಗಿಸಿ. ಲಾಠಿಚಾರ್ಜ್‌ ಹಾಗೂ ಅಶ್ರುವಾಯು ದಾಳಿಗೆ ಹೊಣೆಗಾರರು ಯಾರು ಎಂಬುದನ್ನು ತಿಳಿಸಿ. ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರ ಜೊತೆ ಅರ್ಥಪೂರ್ಣ ಸಂವಾದ ನಡೆಸಿ. ನಮ್ಮ ಶಿಕ್ಷಣ ವ್ಯವಸ್ಥೆ ಮೇಲಿನ ಸಾರ್ವಜನಿಕರ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಿ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣೆಯ ವೈಫಲ್ಯ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ಹತ್ತಿಕ್ಕಲಾಗುತ್ತಿದೆ ಎಂದು ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಶ್ನಿಸುತ್ತಿರುವ ನಮ್ಮ ಯುವಜನತೆಗೆ ಉತ್ತರ ಪಡೆಯುವ ಹಕ್ಕಿದೆ. ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಮಾತುಕತೆ ಮೂಲಕ ಬಗೆಹರಿಸಿ ಎಂದು ಮೋದಿಗೆ ಪರಮೇಶ್ವರ್‌ ಒತ್ತಾಯಿಸಿದ್ದಾರೆ. ಇದನ್ನೂ ಓದಿ : ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿಕೆ ಶಿವಕುಮಾರ್ ಆಗ್ರಹ..!

Related posts

We Want Sanju – ಆಟಗಾರರ ಮುಂದೆ ಆಕ್ರೋಶ ಹೊರಹಾಕಿದ ಅಭಿಮಾನಿಗಳು

Kalpana Editor

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು – ಡಿಸಿಎಂ ಜಿ. ಪರಮೇಶ್ವರ್

Kalpana Editor

“ಡಿಕೆಶಿಗೆ ಹನಿಮೂನ್ ಪಿರಿಯಡ್ ಇಲ್ಲ, ಸಿದ್ದರಾಮಯ್ಯ ಗೂಗ್ಲಿ ಹಾಕಿ ಹೋಗಿದ್ದಾರೆ!” – ಬಿ.ವೈ. ವಿಜಯೇಂದ್ರ ಭವಿಷ್ಯ!

kknewskannada1987@gmail.com