29.2 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿರಾಜ್ಯ

ಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ, ಪ್ರತಿಭಟನೆ; ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ..!

ಯಾದಗಿರಿ : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದನ್ನು ವಿರೋಧಿಸಿ ಯಾದಗಿರಿಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಯಾದಗಿರಿಯ ಸುಭಾಷ್ ವೃತ್ತದಲ್ಲಿ ನೂರಾರು ಅಭಿಮಾನಿಗಳು ಸಿದ್ದರಾಮಯ್ಯ ಅವರ ಪರವಾಗಿ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಭೀಮು ಪೂಜಾರಿ ಎಂಬ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ನನ್ನ ಸಾವಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕಾರಣರಾಗುತ್ತಾರೆಂದು ಹೇಳಿ, ಸಾರ್ವಜನಿಕರ ಎದುರೇ ಕ್ರಿಮಿನಾಶಕದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳದಲ್ಲಿಯೇ ಇದ್ದ ಇತರೆ ಪ್ರತಿಭಟನಾಕಾರರು ಹಾಗೂ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ತಡೆದು, ಬಾಟಲಿಯನ್ನು ವಶಕ್ಕೆ ಪಡೆದಿದ್ದಾರೆ.

Related posts

‘ಪೆದ್ದಿ’ ಸಿನಿಮಾ ರಿಲೀಸ್​​ಗೆ, ಮೊದಲು ಫ್ಯಾನ್ಸ್​​ಗೆ ಬ್ಯಾಡ್ ನ್ಯೂಸ್..!

Kalpana Editor

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ..?!

Kalpana Editor

ಐಟಿಐ, 10ನೇ ತರಗತಿ ಪಾಸ್ ಆದವರಿಗೆ ರಕ್ಷಣಾ ಇಲಾಖೆಯಲ್ಲಿ ಉದ್ಯೋಗ..!

Kalpana Editor