August 25, 2026
kranthikidi.com
ತಾಜಾಸುದ್ದಿರಾಜ್ಯ

ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನಗಳ ಕಾಲ ಇಡಿ ಕಸ್ಟಡಿಗೆ..!

ಬೆಂಗಳೂರು : ಬೆಳಗಾವಿ ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದಲ್ಲಿ ಶಿವಾನಂದ ನೀಲಣ್ಣನವರ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರು ವಲಯ ಇಡಿ ಅಧಿಕಾರಿಗಳು ನೀಲಣ್ಣನರ್‌ನನ್ನು ಬಂಧಿಸಿದ್ದಾರೆ. ಮಂಗಳೂರು ಇಡಿ ವಿಶೇಷ ನ್ಯಾಯಾಲಯ ಆರೋಪಿಯನ್ನು ಆ.24ರ (12 ದಿನಗಳ ಕಾಲ) ವರೆಗೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಇಡಿ ತನಿಖೆಯಲ್ಲಿ ಪ್ರಕರಣ ಅನೇಕ ವಿಚಾರ ಬಯಲಾಗಿದೆ. ಶಿವಾನಂದ ಕಂಪನಿಯ ಹಣದ ವ್ಯವಹಾರದ ಮುಖ್ಯ ವ್ಯಕ್ತಿಯಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢದಾದ್ಯಂತ ಹೂಡಿಕೆ ಸಂಗ್ರಹ ಮಾಡಿದ್ದಾನೆ. ಪೋಂಜಿ ಶೈಲಿ ಸ್ಕೀಮ್ ಮೂಲಕ 2,110.97 ಕೋಟಿ ರೂ. ಅಕ್ರಮವಾಗಿ ಸಂಗ್ರಹಿಸಲಾಗಿದೆ. ಆದರೆ ಒಂದು ಭಾಗದಷ್ಟು ಮಾತ್ರ ಹಣ ಮರುಪಾವತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಂಸ್ಥೆಯು 2019 ರಿಂದ ಷೇರು ಮಾರುಕಟ್ಟೆಯಲ್ಲಿ ತೀವ್ರ ನಷ್ಟವನ್ನು ಅನುಭವಿಸಿದೆ. ಈ ನ್ಯೂನತೆ ಮರೆಮಾಚಲು ಮತ್ತು ಮಾರುಕಟ್ಟೆಯ ಆಕರ್ಷಣೆ ಉಳಿಸಿಕೊಳ್ಳಲು, ಹೂಡಿಕೆದಾರರಿಂದ ಸಂಗ್ರಹಿಸಲಾದ ಹೊಸ ಮೂಲ ಠೇವಣಿ ಹಣವನ್ನು ಹಿಂದಿನ ಹೂಡಿಕೆದಾರರಿಗೆ ನೀಡಬೇಕಾದ ಬಡ್ಡಿ ನೀಡಲು ಬಳಸಲಾಗಿದೆ.

ಅಕ್ರಮ ಬಂಡವಾಳವನ್ನು ವೈಯಕ್ತಿಕ ಐಷಾರಾಮಿ ವಾಹನಗಳ ಖರೀದಿಗೆ, ದೊಡ್ಡ ಬಂಗಲೆಗಳನ್ನು ನಿರ್ಮಿಸಲು ಪಾಲುದಾರರ ಹೆಸರಿನಲ್ಲಿ ಆಸ್ತಿಗಳನ್ನು ಖರೀದಿಸಲು, ಚಲನಚಿತ್ರ ನಿರ್ಮಾಣಗಳಿಗೆ ವರ್ಗಾಯಿಸಲು ಹಣ ಬಳಸಲಾಗಿದೆ. ಇಂತಹ ದುರುಪಯೋಗದ ಹಣವನ್ನು “ಅಪರಾಧದ ಆದಾಯ” ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ : ಸಾವರ್ಕರ್ ವಿರುದ್ಧ ಹೇಳಿಕೆ; ಮಾನನಷ್ಟ ಕೇಸ್‌ ರದ್ದು, ರಾಹುಲ್‌ಗೆ ಬಿಗ್‌ ರಿಲೀಫ್‌..!

Related posts

NH 66 ಚಿತ್ರದ ನಟ ಪ್ರಮೋದ್ ಶೆಟ್ಟಿ ಫಸ್ಟ್ ಲುಕ್ ರಿಲೀಸ್..!

kknewskannada1987@gmail.com

ಐಪಿಎಲ್ ಫೈನಲ್ ಸೋಲಿನ ಬೆನ್ನಲ್ಲೇ ಬೆಂಕಿ ಅವಘಡ – ಪಾರಾದ ಜಿಟಿ ತಂಡ

Kalpana Editor

ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ, ಆದ್ರೆ ನಾನು ಫೇಲಾದೆ: ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!

Kalpana Editor