August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡ್ತಾರೋ ಗೊತ್ತಿಲ್ಲ; ಶೋಭಾ ಕರಂದ್ಲಾಜೆ

ಬೆಂಗಳೂರು : ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಖುರ್ಚಿ ಕಾದಾಟ ವಿಚಾರವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ ಎಂದರು.

ಮೂರು ವರ್ಷದ ಸರ್ಕಾರದಲ್ಲಿ 2.5 ವರ್ಷ ಸಿಎಂ ಬದಲಾವಣೆ ಬಗ್ಗೆಯೆ ಚರ್ಚೆಯಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ. ಒಂದು ಕಡೆ ಬರಗಾಲ ಮತ್ತೊಂದು ಕಡೆ ನೆರೆ ಬರುತ್ತಿದೆ. ಬೆಂಗಳೂರು ಮಳೆಯಿಂದ ಮುಳುಗುತ್ತಿದೆ, ಗಾರ್ಬೆಜ್‌ನ ಹಗರಣ ನಡೆಯುತ್ತಿದೆ. ಇವೆಲ್ಲವನ್ನೂ ಬಿಟ್ಟು ಖುರ್ಚಿಗಾಗಿ ಹೊಡೆದಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಖುರ್ಚಿ ಉಳಿಸುವ ಯತ್ನ ಮಾಡುತ್ತಿದ್ದರೆ, ಡಿಕೆಶಿ ಸಿಎಂ ಆಗುವ ಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಜನರು ಬಡವರಾಗಿದ್ದಾರೆ. ಯಾವುದೆ ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ, ಅಭಿವೃದ್ಧಿಗೆ ಹಣವಿಲ್ಲ. ಜನರ ಕೆಲಸ ಮಾಡಲು 135 ಸೀಟ್ ಗೆಲ್ಲಿಸಿದ್ದಾರೆ, ಜನರ ಕೆಲಸ ಮಾಡಿ ಎಂದು ಕಿಡಿಕಾರಿದರು.

Related posts

ಮೊದಲ ಬಾರಿ ಮಗನ ಫೋಟೋ ಹಂಚಿಕೊಂಡ ನಟ ಡಾಲಿ ಧನಂಜಯ

Kalpana Editor

ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ..!

Kalpana Editor

ಗುತ್ತಿಗೆದಾರನ ಕಿಡ್ನ್ಯಾಪ್‌; 16 ಲಕ್ಷ ಹಣ, ಚಿನ್ನಾಭರಣ ಕಸಿದು ಗ್ಯಾಂಗ್‌ ಎಸ್ಕೇಪ್‌..!

Kalpana Editor