July 13, 2026
kranthikidi.com
ತಾಜಾಸುದ್ದಿರಾಜ್ಯ

ನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌, ಬಾಯಿ ಚಪ್ಪರಿಸಿ ತಿಂದ ಸಿದ್ದರಾಮಯ್ಯ

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಇಂದು ಭರ್ಜರಿ ಬಾಡೂಟ ಸವಿದರು. ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದ, ಸಿದ್ದರಾಮಯ್ಯ ಅವರು ಎಸ್‌ಐಆರ್ ಕುರಿತ ಕಾಂಗ್ರೆಸ್ ಪಕ್ಷದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಬಳಿಕ ಕಾಂಗ್ರೆಸ್‌ನ ನಾಯಕರಿಗೆ ತಮ್ಮ ಮನೆಯಲ್ಲೇ ಬಾಡೂಟದ ವ್ಯವಸ್ಥೆ ಮಾಡಿದ್ದರು. ನಾಟಿಕೋಳಿ ಸಾರು, ಮುದ್ದೆ, ಚಿಕನ್‌ ಚಾಪ್ಸ್‌, ಪಲಾವ್‌ ಹಾಗೂ ಸಸ್ಯಾಹಾರದ ಊಟ ವ್ಯವಸ್ಥೆಯನ್ನೂ ಮಾಡಿದ್ದರು. ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಸಿದ್ದರಾಮಯ್ಯ ನಿವಾಸ ಮುಂದೆ ಜರ್ಮನ್ ಟೆಂಟ್ ಹಾಕಿ ಊಟದ ವ್ಯವಸ್ಥೆ ಮಾಡಲಾಗಿತ್ತು. ತಾವು ಕೂಡ ಕಾಂಗ್ರೆಸ್‌ ಶಾಸಕರು ಹಾಗೂ ಸಂಸದರೊಟ್ಟಿಗೆ ಕುಳಿತು ಊಟ ಸವಿದಿದ್ದಾರೆ. ಇದನ್ನೂ ಓದಿ : ವಕ್ಫ್ ವಿವಾದ; ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ, ಆರ್‌.ಅಶೋಕ್

Related posts

ಮೂತ್ರನಾಳದ ಸೋಂಕಿನ ಕುರಿತು ನಿರ್ಲಕ್ಷ ಬೇಡ; ತಡೆಗಟ್ಟಲು ಇಲ್ಲಿದೆ ಮಾರ್ಗದರ್ಶನ..

Kalpana Editor

ಲೋಕೇಶ್ ಕನಗರಾಜ್ ಬಳಿಕ ಮತ್ತೊಬ್ಬ ತಮಿಳು ನಿರ್ದೇಶಕನ ಸಿನಿಮಾನಲ್ಲಿ ಉಪೇಂದ್ರ

Kalpana Editor

ಐರ್ಲೆಂಡ್, ಇಂಗ್ಲೆಂಡ್ ಟಿ20 ಸರಣಿ; ಸಿರಾಜ್ ಬದಲಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಆಯ್ಕೆ..!

Kalpana Editor