August 2, 2026
kranthikidi.com
ಆರೋಗ್ಯತಾಜಾಸುದ್ದಿ

ಒಬೆಸಿಟಿ ಮತ್ತು ಡಯಾಬಿಟಿಸ್ ಸಮಸ್ಯೆ ತಡೆಯಲು ಸಿಂಪಲ್ ಟಿಪ್ಸ್..!

ದೇಶದಲ್ಲಿ ಸ್ಥೂಲಕಾಯತೆ ಮತ್ತು ಮಧುಮೇಹ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಆರೋಗ್ಯ ಸಮೀಕ್ಷೆಯ ವರದಿ ತಜ್ಞರಲ್ಲಿ ಆತಂಕ ಮೂಡಿಸಿದೆ. 2019ರ ನಂತರ ಈ ಎರಡೂ ಆರೋಗ್ಯ ಸಮಸ್ಯೆಗಳ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6 ವರದಿ ಪ್ರಕಾರ, 15 ರಿಂದ 49 ವರ್ಷದೊಳಗಿನ ಪುರುಷರು ಮತ್ತು ಮಹಿಳೆಯರಲ್ಲಿ ಅಧಿಕ ತೂಕ ಹಾಗೂ ಸ್ಥೂಲಕಾಯದ ಪ್ರಮಾಣ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿದೆ. ಪುರುಷರಲ್ಲಿ ಶೇಕಡಾ 4.4ರಷ್ಟು ಮತ್ತು ಮಹಿಳೆಯರಲ್ಲಿ ಶೇಕಡಾ 6.7ರಷ್ಟು ಏರಿಕೆ ದಾಖಲಾಗಿದೆ.

2019-21ರಲ್ಲಿ ಶೇಕಡಾ 24ರಷ್ಟು ಮಹಿಳೆಯರು ಅಧಿಕ ತೂಕ ಅಥವಾ ಸ್ಥೂಲಕಾಯದಿಂದ ಬಳಲುತ್ತಿದ್ದರು. ಆದರೆ 2023-24ರಲ್ಲಿ ಈ ಪ್ರಮಾಣ ಶೇಕಡಾ 30.7ಕ್ಕೆ ಏರಿಕೆಯಾಗಿದೆ. ಅಂದರೆ, ಪ್ರತಿ ಮೂವರು ಮಹಿಳೆಯರಲ್ಲಿ ಒಬ್ಬರು ಈಗ ಸ್ಥೂಲಕಾಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮೀಕ್ಷೆಯನ್ನುದೇಶದ 715 ಜಿಲ್ಲೆಗಳಲ್ಲಿ ನಡೆಸಲಾಗಿದ್ದು, ಸುಮಾರು 6.79 ಲಕ್ಷ ಕುಟುಂಬಗಳನ್ನು ಒಳಗೊಂಡಿತ್ತು. ನಗರ ಪ್ರದೇಶಗಳಲ್ಲಿ ಸಮಸ್ಯೆ ಹೆಚ್ಚು ಗಂಭೀರವಾಗಿದ್ದು, ಶೇಕಡಾ 42.8ರಷ್ಟು ಮಹಿಳೆಯರು ಅಧಿಕ ತೂಕ ಅಥವಾ ಸ್ಥೂಲಕಾಯದಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಮಾಣ ಶೇಕಡಾ 25.5ರಷ್ಟಿದೆ. ಜಂಕ್ ಫುಡ್ ಸೇವನೆ, ಕುಳಿತು ಕೆಲಸ ಮಾಡುವ ಅಭ್ಯಾಸ ಹಾಗೂ ವ್ಯಾಯಾಮದ ಕೊರತೆ ಪ್ರಮುಖ ಕಾರಣಗಳಾಗಿವೆ.

ಮಧುಮೇಹದ ಅಪಾಯವೂ ಹೆಚ್ಚಳ – ಮಧುಮೇಹದ ಅಪಾಯವೂ ಹೆಚ್ಚುತ್ತಿದೆ.15 ವರ್ಷಕ್ಕಿಂತ ಮೇಲ್ಪಟ್ಟ ಪುರುಷರಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿರುವವರ ಸಂಖ್ಯೆ 2019-21ರ ಶೇಕಡಾ 15.6ರಿಂದ 2023-24ರಲ್ಲಿ ಶೇಕಡಾ 20.9ಕ್ಕೆ ಏರಿಕೆಯಾಗಿದೆ. ಮಹಿಳೆಯರಲ್ಲೂ ಮಧುಮೇಹದ ಪ್ರಕರಣಗಳು ಹೆಚ್ಚುತ್ತಿದ್ದು, ವಿಶೇಷವಾಗಿ ನಗರ ಪ್ರದೇಶದ ಮಹಿಳೆಯರಲ್ಲಿ ಈ ಪ್ರವೃತ್ತಿ ಹೆಚ್ಚಾಗುತ್ತಿದೆ.

ಈ ರೀತಿಯ ಸಮಸ್ಯೆ ತಡೆಗಟ್ಟಲು ವೈದ್ಯರು ನೀಡಿರುವ ಸಲಹೆ : ಪ್ರತಿದಿನ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡಿ. ಜಂಕ್ ಫುಡ್ ಮತ್ತು ಸಕ್ಕರೆಯುಕ್ತ ಆಹಾರವನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ. ಹಣ್ಣು, ತರಕಾರಿ ಹಾಗೂ ನಾರಿನಾಂಶಯುಕ್ತ ಆಹಾರ ಹೆಚ್ಚಿಸಿ. ಸರಿಯಾಗಿ ನಿದ್ರೆ ಮಾಡಿ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದೇ ಸ್ಥೂಲಕಾಯ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುವ ಅತ್ಯುತ್ತಮ ಮಾರ್ಗವಾಗಿದೆ.

Related posts

ಡಿಕೆ ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ – ಅಧಿಕೃತ ಘೋಷಣೆ..!

Kalpana Editor

ಬಲವಂತವಾಗಿ ಜಿಮ್ಖಾನಾ ಕ್ಲಬ್​ ಖಾಲಿ ಮಾಡಿಸುವುದಿಲ್ಲ; ಸರ್ಕಾರ ಸ್ಪಷ್ಟನೆ..!

Kalpana Editor

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ತೀವ್ರ ಬರಪೀಡಿತ ರೈತರಿಗೆ ಪರಿಹಾರ ನೀಡುವಂತೆ ಬಿ. ವೈ. ವಿಜಯೇಂದ್ರ ಆಗ್ರಹ..!

Kalpana Editor