July 12, 2026
kranthikidi.com
ತಾಜಾಸುದ್ದಿರಾಜ್ಯ

ಟೋಲ್ ವಿರೋಧಿಸಿ, ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ರಾಜ್ಯ ರೈತ ಸಂಘ ಕರೆ..!

ಮಂಡ್ಯ : ರಾಜ್ಯದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಮತ್ತು ರೈತರ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ, ಜೂನ್ 23 ರಂದು ರಾಜ್ಯಾದ್ಯಂತ ಟೋಲ್‌ ಬೂತ್‌ಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದೆ‌.

ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ ಎಂದು ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕಬ್ಬು, ತರಕಾರಿ ಮತ್ತು ಹಣ್ಣುಗಳನ್ನು ಸಾಗಿಸುವ ಕೃಷಿ ವಾಹನಗಳ ಮೇಲೆ ಟೋಲ್ ವಿಧಿಸುವುದರಿಂದ ರೈತರ ಮೇಲೆ ತೀವ್ರ ಆರ್ಥಿಕ ಹೊರೆ ಬೀಳುತ್ತಿದೆ. ಕೂಡಲೇ ಇಂತಹ ವಾಹನಗಳಿಗೆ ಟೋಲ್ ಸುಂಕದಿಂದ ವಿನಾಯಿತಿ ನೀಡಬೇಕು. ವಾಹನ ಖರೀದಿ ಸಂದರ್ಭದಲ್ಲೇ ಮಾಲೀಕರು ರಸ್ತೆ ತೆರಿಗೆ ಪಾವತಿಸುತ್ತಾರೆ.

ಹೀಗಿರುವಾಗ ಮತ್ತೆ ಟೋಲ್ ವಸೂಲಿ ಮಾಡುವುದು ಸರಿಯಲ್ಲ ಎಂದು ಆಗ್ರಹಿಸಿ, ರಾಜ್ಯದ ಎಲ್ಲಾ ಟೋಲ್‌ಗಳನ್ನ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಪಂಜಾಬ್‌ನಲ್ಲಿ ಅನುಸರಿಸುತ್ತಿರುವ ಸುಂಕ ವಸೂಲಿ ಮಾದರಿಯನ್ನ ಕರ್ನಾಟಕದಲ್ಲೂ ಜಾರಿಗೆ ತರಬೇಕು‌, ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಕಬ್ಬಿನ ಬಾಕಿ ಹಣ ತಕ್ಷಣ ಪಾವತಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ : ಪೋಕ್ಸೋ ಪ್ರಕರಣ; ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಆದೇಶ ಮುಂದೂಡಿಕೆ..!

Related posts

ಬಕ್ರೀದ್‌ಗೆ ಬಲಿ ಕೊಡಲು ಖರೀದಿಸಿದ್ದ, ಟ್ರಂಪ್ ಹೋಲುವ ಎಮ್ಮೆ ಮೃಗಾಲಯಕ್ಕೆ ಶಿಫ್ಟ್..!

Kalpana Editor

ಒಂದು ವಾಹನಕ್ಕೆ 200 ಲೀಟರ್‌ ದಿನಕ್ಕೆ ಮಾತ್ರ – ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ ಸರ್ಕಾರ..!

Kalpana Editor

ಮೈಸೂರು ದಸರಾ 2026; ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇಸಿಜಿ

Kalpana Editor