28.2 C
ಬೆಂಗಳೂರು
July 11, 2026
kranthikidi.com
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರಿ ದುರಂತ; ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮ ಹಾಗೂ ಎಫ್ ಐಆರ್ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾದಾಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಸಾವನ್ನಪ್ಪಿದ ಏಳು ಮಂದಿಯ ಪಾರ್ಥಿವ ಶರೀರ ಇರಿಸಿರುವ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ ಭೇಟಿ ನೀಡಿ, ಗಾಯಾಳುಗಳು ಹಾಗೂ ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಯಾವ ಅಧಿಕಾರಿಗಳ ಮೇಲಾದರೂ ಕ್ರಮ ತೆಗೆದುಕೊಳ್ಳಲಾಗಿದೆಯೇ? – ಕ್ವಾರಿ ಮಾಲೀಕರು ಸಿಕ್ಕಿದ್ದಾರೆಯೇ ಎಂದು ಕೇಳಿದಾಗ, ” ಅಧಿಕಾರಿಗಳ ಮೇಲೆ ಏನು ಮಾಡೋಕಾಗುತ್ತೆ. ಗಣಿಗಾರಿಕೆ ಕಾರ್ಯಸೂಚಿ ಬಗ್ಗೆ ಶೀಘ್ರದಲ್ಲೇ ‌ಸಭೆ ಕರೆದು ಮಾತನಾಡುತ್ತೇನೆ. ಈ ಕಾರ್ಯಸೂಚಿಯ ಅನ್ವಯದ ಪ್ರಕಾರನೇ ಮುಂದಕ್ಕೆ ಕ್ವಾರಿಗಳು ಕೆಲಸ ಮಾಡಬೇಕಾಗುತ್ತದೆ. ಅಧಿಕಾರಿಗಳ ಪ್ರಕಾರ ಗಣಿಗಾರಿಕೆ ಕಾರ್ಯಸೂಚಿ ಮಾಡುತ್ತಿದ್ದೇವೆ. ಭವಿಷ್ಯದಲ್ಲಿ ಎಲ್ಲಾ ಕ್ವಾರಿಗಳಿಗೂ ನಾವು ನಿಯಮ ತರಬೇಕಾಗುತ್ತದೆ. ಈಗ ದುರ್ಘಟನೆ ನಡೆದಿದೆ. ಮುಂದಕ್ಕೆ ಇಂತಹ ಘಟನೆಗಳು ನಡೆಯಬಾರದು ಎಂದು ಮಾರ್ಗದರ್ಶನ ನೀಡುತ್ತೇವೆ” ಎಂದರು.

“ಎಲ್ಲಾ ವರದಿಗಳನ್ನು ತರಿಸಿಕೊಳ್ಳುತ್ತೇವೆ. ಏನೇನು ಉಲ್ಲಂಘನೆ ಮಾಡಲಾಗಿದೆ‌ ಎಂದು ಪರಿಶೀಲನೆ ನಡೆಸಲಾಗುವುದು. ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ. ಬೇರೆಯವರಿಗೆ ಹೇಗೆ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಲಾಗುವುದೋ ಅದೇ ರೀತಿ ಇಲ್ಲೂ ಮಾಡಲಾಗುವುದು” ಎಂದರು.

ಅಕ್ರಮ ಎನ್ನುವುದಕ್ಕೆ ಅವರ ಬಳಿ ದಾಖಲೆ ಏನಿದೆ? – ಎರಡು ಮೂರು ವರ್ಷದಿಂದ ಅಕ್ರಮ ಕ್ವಾರಿಗಳ ಸಂಖ್ಯೆ ಜಾಸ್ತಿ ಆಗಿದೆ. ಇಡೀ ಸರ್ಕಾರವೇ ನಿಯಮಬಾಹಿರ ಸರ್ಕಾರ ಎಂದು ವಿಪಕ್ಷ ನಾಯಕ ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, “ಎಲ್ಲರೂ ಅವರ ಕಡೆಯವರೇ ಮಾಡುತ್ತಾ ಇರೋದಲ್ಲವೇ? ಎಲ್ಲಾ ಕಡೆ ಅಕ್ರಮ ಗಣಿಗಾರಿಕೆ ಅನ್ನುವುದಕ್ಕೆ ಅವರ ಬಳಿ ದಾಖಲೆ ಏನಿದೆ? ಕ್ವಾರಿಗಳನ್ನು ನೀವೆಲ್ಲಾ (ಮಾಧ್ಯಮದವರು) ನೋಡಿದ್ದೀರಿ‌. ಅವರೆಲ್ಲಾ ಒಂಡೆರಡು ವರ್ಷದಿಂದ ಮಾಡಿರುವ ಕೆಲಸವೇ? ಇಪ್ಪತ್ತು ಮೂವತ್ತು ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸರ್ಕಾರಗಳ ಕಾಲದಲ್ಲೂ ಕೆಲಸ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯಿಸಿದರು.

ಗಾಯಗೊಂಡವರ ಪರಿಸ್ಥಿತಿ ಹೇಗಿದೆ ಎಂದು ಕೇಳಿದಾಗ, “ಲೈಸೆನ್ಸ್ ಕ್ವಾರಿಗಳನ್ನು ನಡೆಸಲಾಗುತ್ತಿದೆ. ಘಟನೆ ನಡೆದ ಸ್ಥಳದ ಫೋಟೊಗಳನ್ನು ನೋಡಿದರೆ ಗಾಬರಿಯಾಗುತ್ತದೆ. ಬೆಳಗ್ಗೆ 7 ಗಂಟೆ ಹೊತ್ತಿಗೆ ದುರ್ಘಟನೆ ನಡೆದಿದೆ. 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 5 ಮಂದಿ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಒಬ್ಬರಿಗೆ ಗಂಬೀರ ಗಾಯವಾಗಿದೆ. ಮೃತಪಟ್ಟವರಲ್ಲಿ ಒಬ್ಬರು ಯಾದಗಿರಿ ಜಿಲ್ಲೆಯವರು, ಮಿಕ್ಕವರು ಹೊರ ರಾಜ್ಯದ ಕಾರ್ಮಿಕರು. ಅವರ ಕುಟುಂಬದವರನ್ನು ಪೊಲೀಸರು ಸಂಪರ್ಕಿಸಿದ್ದಾರೆ. ಮೃತದೇಹಗಳನ್ನು ಕಳಿಸುವ ಕೆಲಸ ಮಾಡಲಾಗುವುದು” ಎಂದರು. “ಸರ್ಕಾರದಿಂದ ನಿಯಮಾನುಸಾರ ಪರಿಹಾರ ವಿತರಣೆ ಮಾಡಲಾಗುವುದು. ಕ್ವಾರಿ ಮಾಲೀಕರಿಂದಲೂ ಪ್ರತ್ಯೇಕವಾಗಿ ಪರಿಹಾರ ನೀಡಲು ಸೂಚನೆ ನೀಡಲಾಗಿದೆ” ಎಂದು ಹೇಳಿದರು. ಇದನ್ನೂ ಓದಿ : ಹಿಂದಿಯನ್ನು ರಾಜ ಭಾಷೆ ಎಂದು ಕರೆದ ಡಿಸಿಎಂ ಪವನ್ ಕಲ್ಯಾಣ್

Related posts

ಪ್ರಧಾನಿ ಮೋದಿ ಭೇಟಿ ಮಾಡಿ ಕರ್ನಾಟಕದ ಬೇಡಿಕೆಗಳ ಪಟ್ಟಿ ಸಲ್ಲಿಸಿದ ಸಿಎಂ ಡಿಕೆಶಿ ಸಿಎಂ

Kalpana Editor

ರಾಮನಗರದಲ್ಲಿ ಮಾತ್ರ ಹಾಗಾಗಿದೆ, SIR ದುರ್ಬಳಕೆ ಮಾಡಿಕೊಂಡಿಲ್ಲ; ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ – ಯತೀಂದ್ರ

Kalpana Editor

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ; ಹೆಚ್‌ಡಿಕೆ

Kalpana Editor