kranthikidi.com
ಕ್ರೈಂತಾಜಾಸುದ್ದಿರಾಜ್ಯ

ಎಸ್‌ಐಆರ್ ಕರ್ತವ್ಯದಲ್ಲಿದ್ದ, ಶಿಕ್ಷಕಿ ಹೃದಯಾಘಾತಕ್ಕೆ ಬಲಿ..!

ಬೆಂಗಳೂರು : ಎಸ್‌ಐಆರ್ ಕರ್ತವ್ಯದಲ್ಲಿದ್ದ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಮಂತ ಕುಮಾರಿ (44) ಮೃತ ಶಿಕ್ಷಕಿ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಶುಗರ್, ಬಿಪಿ ಹೆಚ್ಚಾಗಿ ತೀವ್ರ ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ (ಜು.23) ರಾತ್ರಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಮೇಲಾಧಿಕಾರಿಗಳು ಎಸ್‌ಐಆರ್ ಪ್ರಕ್ರಿಯೆ ಬೇಗ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ಕೆಲಸದಿಂದ ಬಿಡುಗಡೆ ಮಾಡಬಹುದಾ ಎಂದು ಕೇಳಿಕೊಂಡಿದ್ದರು. ಮೇಲಾಧಿಕಾರಿಗಳ ಒತ್ತಡದಿಂದ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ : ಸಿಜೆಪಿ ಪ್ರತಿಭಟನೆಯಲ್ಲಿ ಹಿಂಸಾಚಾರ; ಆರೋಪಿಗಳ ಪಾಸ್‌ಪೋರ್ಟ್ ರದ್ದು..!

Related posts

ನೀಟ್ ಪ್ರತಿಭಟನೆ ಬಿಸಿ: ರಾಮಾಯಣ ಟ್ರೇಲರ್ ಬಿಡುಗಡೆ ಮುಂದಕ್ಕೆ..!

Kalpana Editor

ಕಾಲೇಜಿಗೆ ನುಗ್ಗಿ ಮಗಳಿಗೆ ಚಾಕು ಇರಿದ ಪಾಪಿ ತಂದೆ..!

Kalpana Editor

ಮಳೆಗೆ ಸೇತುವೆ ಕುಸಿತ; ಚಿಂಚೋಳಿ – ಭಾಲ್ಕಿ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತ..!

Kalpana Editor