ಚಿತ್ರದುರ್ಗ : ತಾಲೂಕಿನ ಗೊಡಬನಹಾಳ್ ಗ್ರಾಮಸ್ಥರಲ್ಲಿ ಹಲವು ದಿನಗಳಿಂದ ಭೀತಿ ಹುಟ್ಟಿಸಿದ್ದ ಚಿರತೆಯನ್ನ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಗೊಡಬನಹಾಳ್ ಗ್ರಾಮದ ಜಮೀನಲ್ಲಿ ಅವಿತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಹೊಂಚು ಹಾಕಿ ಸೆರೆ ಹಿಡಿದಿದ್ದಾರೆ. ಇದರಿಂದ ಸುತ್ತಮುಲಿನ ಗ್ರಾಮಸ್ಥರೂ ನಿಟ್ಟುಸಿರುವ ಬಿಟ್ಟಿದ್ದಾರೆ.
ಹಲವು ದಿನಗಳಿಂದಲೂ ಗೊಡಬನಹಾಳ್ ಗ್ರಾಮಸ್ಥರನ್ನ ಕಾಡಿದ್ದ ಚಿರತೆ, ಎಲ್ಲೆಂದರಲ್ಲಿ ಕುರಿ-ಮೇಕೆಗಳನ್ನ ಹೊತ್ತೊಯ್ಯುತ್ತಿತ್ತು. ಇದರಿಂದ ಗ್ರಾಮಸ್ಥರ ಆಕ್ರೋಶ ಹೆಚ್ಚಾಗಿ ಅರಣ್ಯ ಇಲಾಖೆಗೂ ತಲೆನೋವಾಗಿತ್ತು. ಕೊನೆಗೆ ಹರಸಾಹಸ ಪಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅರಣ್ಯಾಧಿಕಾರಿ ಗೋಪ್ಯಾನಾಯ್ಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ ಜಮೀನಿನಲ್ಲಿ ಸೇರಿಕೊಂಡಿದ್ದ ಚಿರತೆಯನ್ನ ಅರವಳಿಕೆ ಮದ್ದು ನೀಡಿ ಸೆರೆ ಹಿಡಿದಿದೆ. ಈ ದೃಶ್ಯವನ್ನು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನ ಕಣ್ತುಂಬಿಕೊಂಡಿದ್ದಾರೆ. ಸೆರೆಹಿಡಿದ ಚಿರತೆ ಆಡುಮಲ್ಲೇಶ್ವರ ಮೃಗಾಲಯಕ್ಕೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ : ಬಿಡದಿ ಬಿಕ್ಕಟ್ಟು – ಮುಖ್ಯಮಂತ್ರಿ ಜತೆ ಚರ್ಚೆಗೆ ನಾನು ಈಗಲೂ ಸಿದ್ಧ ಎಂದ ಹೆಚ್.ಡಿ.ಕುಮಾರಸ್ವಾಮಿ
