July 12, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಬಿ.ವೈ.ವಿಜಯೇಂದ್ರ – ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ಸಂಬಂಧವೂ ಇಲ್ಲ..!

ಮಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಇಬ್ಬರೂ ಜಯಶಾಲಿಯಾಗಿದ್ದಾರೆ. ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಇದರಿಂದ ನಾನು ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಬಹಳ ನೋವನ್ನು ಅನುಭವಿಸುವಂತಾಗಿದೆ. ಬಿಜೆಪಿ ಶಾಸಕರಿಂದ ಅಡ್ಡ ಮತದಾನವು ಬೇರೆ ಬೇರೆ ಚರ್ಚೆಗೆ ಕಾರಣವಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು ಇಂದು ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಆಗಬೇಕೆಂದು ಹೇಳಿದ್ದು ನಿಜ ಎಂದ ಅವರು, ಪಕ್ಷದ ಹಿರಿಯ ನಾಯಕರ ಅಭಿಪ್ರಾಯ- ಕಿವಿಮಾತಿನನ್ವಯ ಅವರೆಲ್ಲರ ಮಾತಿಗೆ ಗೌರವ ಕೊಟ್ಟು ಕ್ಷೇತ್ರದ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಲು ಬಂದಿರುವುದಾಗಿ ತಿಳಿಸಿದರು.

ಸಾಕಷ್ಟು ಅಪಪ್ರಚಾರ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಡಿ.ಕೆ.ಶಿವಕುಮಾರ್- ನನ್ನ ನಡುವಿನ ಆತ್ಮೀಯತೆ, ಎಲ್ಲೋ ಒಂದು ಕಡೆ ನಾನೇ ಅಡ್ಡ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದೇನೆ ಎಂಬ ಆರೋಪಗಳೂ ಸಾಮಾಜಿಕ ಜಾಲತಾಣ, ಪತ್ರಿಕಾ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾದುದು ನಮ್ಮವರೇ ಎಂಬ ಅರಿವು ನನಗಿದೆ ಎಂದರು.

ನಮ್ಮ ಪ್ರಧಾನಿ ನರೇಂದ್ರ ಮೋದಿಜೀ, ಪಕ್ಷದ ಹಿಂದಿನ ಅಧ್ಯಕ್ಷ ಅಮಿತ್ ಶಾ ಜೀ ಮತ್ತು ಪಕ್ಷದ ಹಿರಿಯರ ಆಶೀರ್ವಾದದಿಂದ ಕೆಲಸ ಮಾಡುತ್ತಿದ್ದೇನೆ. ರಾಜ್ಯಾಧ್ಯಕ್ಷನಾಗಿ ಇಂಥ ಕೀಳು ಮಟ್ಟದ ಕೆಲಸ ಮಾಡುವ ಪ್ರಶ್ನೆಯೇ ಉದ್ಭವವಾಗದು ಎಂದು ತಿಳಿಸಿದರು. ವಿಜಯೇಂದ್ರ- ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಯಾವುದೇ ಆತ್ಮೀಯತೆಯೂ ನಮ್ಮ ಮಧ್ಯೆ ಇಲ್ಲ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರಿಗೆ ಕೊಡಬೇಕಾದ ಗೌರವವನ್ನು ಕೊಟ್ಟಿದ್ದೇನೆ. ಒಬ್ಬ ಶಾಸಕನಾಗಿ ರಾಜ್ಯದ ಮುಖ್ಯಮಂತ್ರಿಗೆ ಕೊಡಬೇಕಾದ ಗೌರವವನ್ನು ಕೊಡಬೇಕಾಗುತ್ತದೆ ಎಂದು ತಿಳಿಸಿದರು. ದೆಹಲಿಯಲ್ಲಿ ಇದ್ದು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ ಕುರಿತು ಅವರು ವಿವರಿಸಿದರು. ನಮ್ಮೆಲ್ಲ ಶಾಸಕರು, ಸಂಸದರು, ಪಕ್ಷದ ಜಿಲ್ಲಾ ಅಧ್ಯಕ್ಷರ ಜೊತೆ ಶ್ರೀದೇವರ (ಶ್ರೀ ಮಂಜುನಾಥೇಶ್ವರ) ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಹೇಳಿದರು.

ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಕಾಣುತ್ತಿದೆ. ಮಳೆ ಸರಿಯಾಗಿ ಬಿದ್ದು ನಾಡಿನ ರೈತನ ಬದುಕು ಹಸನಾಗಬೇಕು, ರೈತರ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕು. ಅವರಿಗೆ ಒಳಿತಾಗಲು ಪ್ರಾರ್ಥನೆ ಸಲ್ಲಿಸಿದ್ದಾಗಿ ವಿವರ ನೀಡಿದರು. ಜೊತೆಗೆ ಮುಂದೆ ಮತ್ತೊಮ್ಮೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಕರ್ನಾಟಕ ರಾಜ್ಯದಲ್ಲಿ ನಮ್ಮೆಲ್ಲರ ನೇತೃತ್ವದಲ್ಲಿ ಒಂದು ಜನಪರ ಸರಕಾರ ಅಧಿಕಾರಕ್ಕೆ ಬರಲಿ; ಹಿಂದುಗಳ ರಕ್ಷಣೆ ಮಾಡುವ, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡುವ ಒಳ್ಳೆಯ ಸರಕಾರ ಬರಲೆಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು.

ಧರ್ಮಾಧಿಕಾರಿಗಳಿಂದ ಆಶೀರ್ವಾದ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಧರ್ಮಾಧಿಕಾರಿ ಪರಮಪೂಜ್ಯ ಡಾಕ್ಟರ್ ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಪಕ್ಷದ ಪ್ರಮುಖರು ಇದ್ದರು. ಇದೇವೇಳೆ ಬಿ.ವೈ.ವಿಜಯೇಂದ್ರ ಮತ್ತು ಪ್ರಮುಖರು ಶ್ರೀದೇವರ ದರ್ಶನ ಪಡೆದರು. ಇದನ್ನೂ ಓದಿ : ಮೆಟಲ್ ಚೈನ್ ಮೆಟ್ರೋ ಡೋರ್ ಗೈಡ್‌ವೇಯಲ್ಲಿ ಸಿಲುಕಿದ್ದರಿಂದ ಬಾಗಿಲು ಮುಚ್ಚಲಿಲ್ಲ: ಮೆಟ್ರೋ ಸ್ಪಷ್ಟನೆ..!

Related posts

ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನೇರ ಸಂದರ್ಶನ..!

Kalpana Editor

ಭಾರತೀಯ ಸಿಬ್ಬಂದಿ ಇದ್ದ, ಹಡಗಿನ ಮೇಲೆ ಅಮೆರಿಕ ದಾಳಿ; ಭಾರತ ತೀವ್ರ ಖಂಡನೆ..!

Kalpana Editor

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್..!

Kalpana Editor