ನವದೆಹಲಿ : ತ್ವಿಶಾ ಶರ್ಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳವು ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಮತ್ತು ಅವರ ಪುತ್ರ ಸಮರ್ಥ್ ಸಿಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ನಿವೃತ್ತ ನ್ಯಾಯಾಧೀಶೆ ಮತ್ತು ವಕೀಲರಾಗಿರುವ ಅವರ ಪುತ್ರ ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿದ್ದಾರೆ. ಮದುವೆಯಾದ ಐದು ತಿಂಗಳ ನಂತರ, ಮೇ 12 ರಂದು ಭೋಪಾಲ್ನಲ್ಲಿರುವ ತನ್ನ ಪತಿಯ ಮನೆಯಲ್ಲಿ ತ್ವಿಶಾ ಶರ್ಮಾ ಶವವಾಗಿ ಪತ್ತೆಯಾಗಿದ್ದರು.
636 ಪುಟಗಳ ಆರೋಪಪಟ್ಟಿಯು ವರದಕ್ಷಿಣೆ ಕಿರುಕುಳಕ್ಕೆ ಸಾವು, ವೈವಾಹಿಕ ಕ್ರೌರ್ಯ, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಸಾಮಾನ್ಯ ಕ್ರಿಮಿನಲ್ ಉದ್ದೇಶದಿಂದ ಮಾಡಿದ ಕೃತ್ಯಗಳ ಮೇಲಿನ ಕಾನೂನುಗಳ ವಿಭಾಗಗಳನ್ನು ಅನ್ವಯಿಸಲಾಗಿದೆ ಎಂದು ಸಿಬಿಐ ತಿಳಿಸಿದೆ. ಸಿಬಿಐನ ಆರೋಪಪಟ್ಟಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಿಎನ್ಎಸ್ನ ಸೆಕ್ಷನ್ 108 ಕೂಡ ಸೇರಿದೆ. ಇದನ್ನೂ ಓದಿ : ಅರಣ್ಯ ಸಿಬ್ಬಂದಿ ಶೂಟೌಟ್ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ..!
