kranthikidi.com
ತಾಜಾಸುದ್ದಿರಾಜ್ಯ

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ..!

ಬೆಂಗಳೂರು : ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ, ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ. ನಾಗರಾಜ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪವನ್‌ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಪ್ರೊ. ನಾಗರಾಜ್‌ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಖರ್ಗೆ ಅವರು ದೆಹಲಿಯಲ್ಲಿರುವ ಕಾರಣ ಬೆಂಗಳೂರಿಗೆ ವಾಪಸ್‌ ಆದ ಬಳಿಕ ಪ್ರಮಾಣ ಪತ್ರ ಪಡೆದುಕೊಳ್ಳಲಿದ್ದಾರೆ.

ರಾಜ್ಯಸಭೆಗೆ ನೂತನ ಸದಸ್ಯರಾಗಿ ಆಯ್ಕೆಯಾದ ಬೆನ್ನಲ್ಲೇ ಕಾಂಗ್ರೆಸ್‌ ಸದಸ್ಯ ಪವನ್ ಖೇರಾ ಮಾತನಾಡಿ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ. ಕನ್ನಡ ಸುಂದರ ಭಾಷೆ, ಮುಂದೆ ನಾನು ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ ಎಂದು ಶಪಥ ಮಾಡಿದರು. ಖರ್ಗೆ ದೆಹಲಿಯಲ್ಲಿ ಇದ್ದಾರೆ, ಬೆಂಗಳೂರಿಗೆ ವಾಪಸ್ ಆದ ಬಳಿಕ ಪ್ರಮಾಣ ಪತ್ರ ಪಡೆಯಲಿದ್ದಾರೆ ಎಂದು ತಿಳಿಸಿದ್ರು.

ರಾಜ್ಯಸಭಾ ಸದಸ್ಯರಾಗಿ ಮನ್ಸೂರು ಅಲಿ ಖಾನ್ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡುತ್ತಿದ್ದಂತೆ ಬೆಂಬಲಿಗರು ಕುಣಿದು ಕುಪ್ಪಳಿಸಿದರು. ವಿಧಾನಸೌಧದ ಹೊರಗಡೆ ಪೋಸ್ಟರ್ ಹಿಡಿದು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದನ್ನೂ ಓದಿ : ದುಡ್ಡು ಕೊಟ್ರೆ ಸಿಗುತ್ತೆ SSLC, PUC, ಡಿಗ್ರಿ ನಕಲಿ ಅಂಕ ಪಟ್ಟಿ..!

Related posts

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ, ಫ್ರೀಡಂ ಪಾರ್ಕ್‌ನಲ್ಲಿ ಸಂಘಟನೆಗಳಿಂದ ಪ್ರತಿಭಟನೆ..!

Kalpana Editor

ನನ್ನ ಅನುಮತಿ ಇಲ್ಲದೆ, ಚಿಕಿತ್ಸೆ ಬೇಡ ಎಂದ ಸೋನಂ ವಾಂಗ್ಚುಕ್ ಪತ್ನಿ

Kalpana Editor

ಅಯೋಧ್ಯೆ, ಬದರಿನಾಥ ಬಳಿಕ ಈಗ ವೈಷ್ಣೋದೇವಿಯಲ್ಲೂ ಅಕ್ರಮ..!

Kalpana Editor