ರಾಯಚೂರು : ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಪರಿಣಾಮ ಕೊಯ್ನಾ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಬರುತ್ತಿದೆ. ಇದರಿಂದಾಗಿ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದ್ದು, ನಾರಾಯಣಪುರ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಡ್ಯಾಮ್ನಿಂದ ನೀರು ಬಿಡುಗಡೆ ಮಾಡಿ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ, ದೇವದುರ್ಗದ ಹೂವಿನಹಡಗಲಿ ಸೇತುವೆಗಳು ಮುಳುಗಡೆ ಹಂತದಲ್ಲಿವೆ. ಈಗಾಗಲೇ ಕಾಡ್ಲೂರಿನ ಉಪೇಂದ್ರ ಕರಾರ್ಚಿತ ಪ್ರಾಣದೇವರ ದೇವಾಲಯ ಸಂಪೂರ್ಣ ಜಲಾವೃತವಾಗಿದೆ. ಇದನ್ನೂ ಓದಿ : ಹೃದಯ ಆರೋಗ್ಯವಾಗಿರಲು ಪ್ರತಿದಿನ ಪಾಲಿಸಬೇಕಾದ ಅಭ್ಯಾಸಗಳು..!
