ಬೆಂಗಳೂರು/ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿನಯ್ ಕುಲಕರ್ಣಿ ಸೇರಿ 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಇಬ್ಬರ ಶ್ಯೂರಿಟಿ, 5 ಲಕ್ಷ ರೂ. ಬಾಂಡ್ಗೆ ಕೋರ್ಟ್ಗೆ ಸೂಚಿಸಿದೆ. ಈ ಮೂಲಕ ಶಾಸಕ ಸ್ಥಾನ ಊರ್ಜಿತವಾಗಿದೆ.
ಇದೇ ವೇಳೆ ಕೋರ್ಟ್, ಪಾಸ್ಪೋರ್ಟ್ನ್ನು ಸೆಷನ್ಸ್ ಕೋರ್ಟ್ಗೆ ನೀಡುವಂತೆ ತಿಳಿಸಿ, ದೇಶ ತೊರೆಯದಂತೆ ಸೂಚಿಸಿದೆ. ಈ ಸಂದರ್ಭದಲ್ಲಿ ವಿನಯ್ ಕುಲಕರ್ಣಿ ಪರ ವಕೀಲರು, ಧಾರವಾಡಕ್ಕೆ ಪ್ರವೇಶಕ್ಕೆ ಹಾಗೂ ಇಂದೇ ಬಿಡುಗಡಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಚಾಮರಾಜನಗರದಲ್ಲಿ ನಟ/ಸಿಎಂ ವಿಜಯ್ ಅಭಿನಯದ ‘ಜನನಾಯಗನ್’ ಸಿನಿಮಾ ಎತ್ತಂಗಡಿ..!
